‘ಮಂಜುಳಾ ಎಂಬ ವೃದ್ಧೆ, ಶೇಷಾದ್ರಿಪುರ ವ್ಯಾಪ್ತಿಯ ಕಲ್ಯಾಣ ಮಂಟಪಗಳಲ್ಲಿ ಉಳಿಯುವ ಸಿಹಿ ತಿನಿಸುಗಳನ್ನು ತಂದು ಕಡಿಮೆ ಬೆಲೆಗೆ ಮಾರಾಟ ಮಾಡಿದ್ದಾರೆ. ಇದನ್ನು ತಿಂದ ಮಕ್ಕಳು ಹಾಗೂ ಮಹಿಳೆಯರಲ್ಲಿ ವಾಂತಿ ಭೇದಿ ಉಂಟಾಗಿ ಅಸ್ವಸ್ಥಗೊಂಡಿದ್ದರು. ಇವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿದೆವು. ಶ್ರೀರಾಮಪುರ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದೇವೆ’ ಎಂದು ಅಸ್ವಸ್ಥ ಮಗುವೊಂದರ ಪೋಷಕ ಜೈಪಾಲ್ ‘ಪ್ರಜಾವಾಣಿ’ಗೆ ತಿಳಿಸಿದರು.