ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಯಸಳೂರು ಪೊಲೀಸ್ ಠಾಣೆಯಲ್ಲಿ ಜಯರಾಂ, ಗ್ರಾಮಲೆಕ್ಕಿಗ ಸೇರಿದಂತೆ ಐವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ದೌರ್ಜನ್ಯ ಕ್ಕೊಳಗಾದ ಕೆಂಚದಾಸಯ್ಯನ ಕುಟುಂಬಕ್ಕೆ ಜಮೀನು ಮಂಜೂರು ಮಾಡಿಕೊಡಬೇಕು ಎಂದು ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಡಿಎಸ್ಎಸ್ ಜಿಲ್ಲಾ ಸಂಚಾಲಕ ಎಸ್.ಎನ್.ಮಲ್ಲಪ್ಪ, ಟಿ.ಕೆ.ದೇವರಾಜ್, ದಲಿತ ಮುಖಂಡರಾದ ಎಚ್.ಕೆ. ಸಂದೇಶ್, ಬಿಎಸ್ಪಿ ಜಿಲ್ಲಾ ಘಟಕದ ಅಧ್ಯಕ್ಷ ಎ.ಪಿ.ಅಹಮ್ಮದ್ ಪಾಲ್ಗೊಂಡಿದ್ದರು.