ಉತ್ಸವ: ಪುಷ್ಪಾಲಂಕೃತ ಮಂಟಪದಲ್ಲಿ ವೀರಭದ್ರಸ್ವಾಮಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಬಳಿಕನಗರದ ಪ್ರಮುಖ ರಸ್ತೆಗಳಲ್ಲಿ ಮಂಗಲ ಕರಡೇವು ವಾದ್ಯ ಹಾಗೂ
ವೀರಭದ್ರನ ಕುಣಿತದೊಂದಿಗೆ ಉತ್ಸವ ನಡೆಯಿತು. ಭಕ್ತರಿಗೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು. ಮಾಜಿ ಶಾಸಕ ಎ.ಎಸ್.ಬಸವರಾಜ್, ನಗರಸಭೆ ಮಾಜಿ ಅಧ್ಯಕ್ಷ ಬಿ.ಎನ್.ವಿದ್ಯಾಧರ್, ದೇವಾಲಯ ಆಡಳಿತ ಮಂಡಳಿ ಸದಸ್ಯರಾದ ಎಂ.ಜಗದೀಶ್, ಬಿ.ವಿ.ವೀರಭದ್ರಪ್ಪ, ವಿಜಯಮ್ಮ ಉಪಸ್ಥಿತರಿದ್ದರು.