ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವಿಶ್ವನಾಥ್ ಕಾಂಗ್ರೆಸ್ ಬಿಡುವುದಿಲ್ಲ’

Last Updated 27 ಏಪ್ರಿಲ್ 2017, 19:30 IST
ಅಕ್ಷರ ಗಾತ್ರ

ಕಡೂರು: ‘ಮಾಜಿ ಸಚಿವ ಎಚ್‌.ವಿಶ್ವನಾಥ್ ಕಾಂಗ್ರೆಸ್‌ನ ಹಿರಿಯ ನಾಯಕರಾಗಿದ್ದು, ಅವರು ಪಕ್ಷವನ್ನು ಬಿಡುವುದಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.

ಪಂಚನಹಳ್ಳಿಗೆ ತೆರಳುವ ಮುನ್ನ ಕಡೂರು ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಎಚ್.ವಿಶ್ವನಾಥ್ ಜೆಡಿಎಸ್ ಸೇರುವ ಸಂಬಂಧ ಮಾತುಕತೆ ಮುಗಿದಿದ್ದು, ಹಲವು ಕಾಂಗ್ರೆಸ್ಸಿಗರು ಜೆಡಿಎಸ್‌ಗೆ ಬರಲು ಸಿದ್ಧರಾಗಿದ್ದಾರೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿರುವುದು ಸ್ವಾಭಾವಿಕ’ ಎಂದರು.

‘ಮುಂದಿನ ಚುನಾವಣೆಯಲ್ಲಿಯೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಮೇಯವೇ ಇಲ್ಲ. ತನ್ನ ಸ್ವಂತ ಬಲದ ಮೇಲೆಯೇ ಕಾಂಗ್ರೆಸ್ ಸರ್ಕಾರ ರಚಿಸಲಿದೆ’ ಎಂದರು.

‘ದತ್ತ ಪೀಠದ ವಿವಾದದ ವಿಚಾರದಲ್ಲಿ ಸರ್ಕಾರವು ಸುಪ್ರೀಂಕೋರ್ಟ್ ನಿರ್ದೇಶನದಂತೆ ಕ್ರಮ ಕೈಗೊಳ್ಳಲಿದ್ದು, ಒಟ್ಟಾರೆಯಾಗಿ ಸೌಹಾರ್ದ ವಾತಾವರಣ ನಿರ್ಮಣವಾಗಬೇಕು ಎಂಬುದು ನಮ್ಮ ಆಶಯ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT