ಬಿಜೆಪಿಯ ಇಲ್ಲಿನ ಮುಖಂಡರೊಬ್ಬರ ಮನೆಯಲ್ಲಿ ನಡೆದ ಕಾರ್ಯಕ್ರಮದ ನಂತರ ಪತ್ರಕರ್ತರ ಜತೆ ಮೌರ್ಯ ಮಾತನಾಡಿದ್ದಾರೆ. ಆಗ, ‘ತ್ರಿವಳಿ ತಲಾಖ್ ನೀಡುವ ಮೂಲಕ ಮುಸ್ಲಿಮರು, ತಮ್ಮ ಹೆಂಡತಿ ಮತ್ತು ಮಕ್ಕಳನ್ನು ಬೀದಿಗೆ ತಳ್ಳುತ್ತಾರೆ. ಭಿಕ್ಷೆ ಬೇಡುವಂತೆ ಮಾಡುತ್ತಾರೆ. ಇಂಥದ್ದನ್ನು ಯಾರೂ ಒಪ್ಪಿಕೊಳ್ಳುವುದಿಲ್ಲ’ ಎಂದೂ ಅವರು ಹೇಳಿದ್ದಾರೆ.