ಮಂಡ್ಯ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವಿರುದ್ಧ ನಡೆದುಕೊಳ್ಳುತ್ತಿರುವುದು ದುರಂತ ಎಂದು ಡಾ.ಬಿ.ಆರ್.ಅಂಬೇಡ್ಕರ್ ಮೊಮ್ಮಗ ಆನಂದ್ರಾಜ್ ವಿಷಾದಿಸಿದರು.
ನಗರದ ಸರ್ಕಾರಿ ಮಹಾವಿದ್ಯಾಲಯದ ಆವರಣದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ನೌಕರರ ಬಳಗದಿಂದ ಅಂಬೇಡ್ಕರ್ ಜಯಂತಿ ಅಂಗವಾಗಿ ಶನಿವಾರ ನಡೆದ ಮೀಸಲಾತಿ ರಕ್ಷಣೆಗಾಗಿ ಬೃಹತ್ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಕೇಂದ್ರವು ವಿರುದ್ಧವಾಗಿದ್ದರೂ, ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನರ ಪರವಾಗಿ ಕೆಲಸ ಮಾಡುತ್ತಿದೆ. ಜತೆಗೆ ಅಂಬೇಡ್ಕರ್ ಆಶಯದಂತೆ ನಡೆದುಕೊಳ್ಳುತ್ತಿದೆ ಎಂದರು.
ಮನುವಾದಿಗಳು ‘ಮನುಸ್ಮೃತಿ’ ಮೂಲಕ ದೇಶದಲ್ಲಿ ಅಶಾಂತಿ ಉಂಟು ಮಾಡಲು ಹೊರಟಿದ್ದಾರೆ ಎಂದು ಅವರು ಹೇಳಿದರು.