ಮುಂದಿನ ವರ್ಷ ಚುನಾವಣೆ ಎದುರಿಸಲು ರಾಜ್ಯ ಸಿದ್ಧವಾಗುತ್ತಿದ್ದಂತೆ ಇತ್ತೀಚಿನ ದಿನಗಳಲ್ಲಿ ಯಡಿಯೂರಪ್ಪ ಮತ್ತು ಈಶ್ವರಪ್ಪ ನಡುವಿನ ಬಿಕ್ಕಟ್ಟು ಮತ್ತಷ್ಟು ಬಿಗಡಾಯಿಸಿತ್ತು. ರಾಜ್ಯ ರಾಜಕೀಯದಲ್ಲಿನ ಈ ಪರಿಸ್ಥಿತಿ ಕೇಂದ್ರದಲ್ಲಿರುವ ನಾಯಕರಿಗೆ ತಲೆನೋವಾಗಿ ಪರಿಣಮಿಸಿದ್ದು, ಬಿಜೆಪಿ ಅಧ್ಯಕ್ಷ ಅಮಿತ್ ಷಾ ಅವರ ಸೂಚನೆ ಮೇಲೆ ರಾಜ್ಯ ಬಿಜೆಪಿ ಉಸ್ತುವಾರಿ ವಹಿಸಿರುವ ಮುರಳೀಧರರಾವ್ ಶನಿವಾರ ರಾತ್ರಿ ಹೈದರಾಬಾದ್ನಿಂದ ಬೆಂಗಳೂರಿಗೆ ಧಾವಿಸಿದ್ದರು.