ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಅಥವಾ ಕೇಂದ್ರದಲ್ಲಿ ಅವಧಿಪೂರ್ವ ಚುನಾವಣೆ ನಡೆಯಲಿದೆ ಎಂಬ ವರದಿಗಳು ಆಧಾರರಹಿತವಾದವು. ಎಲ್ಲಿಂದ ಈ ವದಂತಿ ಹಬ್ಬಿತು ಎಂಬುದು ತಿಳಿಯದು. 2019ರ ಚುನಾವಣೆಗೆ ಸಿದ್ಧರಾಗುವ ನಿಟ್ಟಿನಲ್ಲಿ ಕಠಿಣ ಶ್ರಮವಹಿಸಿ ಕೆಲಸ ಮಾಡಿ ಎಂದು ಕಾರ್ಯಕರ್ತರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹೇಳುತ್ತಿದ್ದಾರೆ. ಅದುವೇ ನಮ್ಮ ಗುರಿ ಆಗಿದೆ’ ಎಂದರು.