ಈ ಸಂಬಂಧ ಕುಮಾರಸ್ವಾಮಿ ಲೇಔಟ್ ಠಾಣೆಗೆ ದೂರು ಕೊಟ್ಟಿರುವ ಹಾಜೀಬೆನತ್, ‘ಬೆಳಿಗ್ಗೆ 10.30ರ ಸುಮಾರಿಗೆ ಸಾರಕ್ಕಿ ಸಿಗ್ನಲ್ನ ಐಸಿಐಸಿಐ ಬ್ಯಾಂಕ್ ಶಾಖೆಗೆ ಹೋಗಿ ₹ 7.5 ಲಕ್ಷ ಡ್ರಾ ಮಾಡಿದೆ. ಆ ಹಣವನ್ನು ಚೀಲದಲ್ಲಿ ಹಾಕಿ ಕಾರಿನ ಹಿಂಬದಿ ಸೀಟಿನಲ್ಲಿಟ್ಟಿದ್ದೆ. ಕನಕಪುರ ರಸ್ತೆ ಮಾರ್ಗವಾಗಿ ಮನೆಗೆ ಹೋಗುತ್ತಿದ್ದಾಗ ಬೈಕ್ನಲ್ಲಿ ಬಂದ ಇಬ್ಬರು ಅಪರಿಚಿತರು, ಹಿಂದಿನ ಚಕ್ರ ಪಂಕ್ಚರ್ ಆಗಿರುವುದಾಗಿ ಹೇಳಿದರು’ ಎಂದು ವಿವರಿಸಿದ್ದಾರೆ.