ಕವಿತಾಳ: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವ ಕುರಿತು ಅಧಿಕಾರಿಗಳು ಭರವಸೆ ನೀಡಿದ ಕಾರಣ ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾ (ಟಿಯುಸಿಐ) ಸಂಘಟನೆ ನೇತೃತ್ವದಲ್ಲಿ ತುಂಗಭದ್ರಾ ಹಂಗಾಮಿ ಕಾರ್ಮಿಕರು ಪಟ್ಟಣದಲ್ಲಿ ಸಂಭ್ರಮಾಚರಣೆ ಮಾಡಿದರು.
ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಆರ್ವೈಎಫ್ಐ ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ, ‘ಶೇ 62ರಷ್ಟು ವೇತನ ಹೆಚ್ಚಳಕ್ಕೆ ಅಧಿಕಾರಿಗಳು ಒಪ್ಪಿಕೊಂಡಿದ್ದು, ಇದು ಹೋರಾಟಕ್ಕೆ ಸಿಕ್ಕ ಜಯ’ ಎಂದರು.
ಜಲ ಸಂಪನ್ಮೂಲ ಕಚೇರಿವರೆಗೆ ಮೆರವಣಿಗೆ ನಡೆಯಿತು. ಮಸ್ಕಿ ಕ್ರಾಸ್ನಲ್ಲಿ ಕಾರ್ಮಿಕ ಸಂಘದ ನಾಮಫಲಕಕ್ಕೆ ಮಾಲಾರ್ಪಣೆ ಮಾಡಲಾಯಿತು.ಈ ವೇಳೆ ಕಾರ್ಮಿಕರು ಪಟಾಕಿ ಸಿಡಿಸಿ ಸಂಭ್ರಮಿಸಿದರು.