ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಏಕ ಕಾಲಕ್ಕೆ ಬೇಡಿಕೆ ಸಮೀಕ್ಷೆ ಮತ್ತು ನೋಂದಣಿ ಕಾರ್ಯ ನಡೆಸಲಾಗುತ್ತದೆ. ‘ಜಿಲ್ಲೆಯಲ್ಲಿ ಪದವೀಧರರ ಸಂಖ್ಯೆ ಕಡಿಮೆಯಿಲ್ಲ. ಆದರೆ, ಅವರಿಗೆ ಅಗತ್ಯ ಕೌಶಲ ತರಬೇತಿ ದೊರೆಯದ ಕಾರಣ ಉದ್ಯೋಗಾವಕಾಶದಿಂದ ವಂಚಿತರಾಗುತ್ತಿದ್ದಾರೆ. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಅಭಿಯಾನ ನಡೆಸಲಾಗುತ್ತಿದೆ’ ಎಂದರು.