ಪ್ರಧಾನಿ ಮೋದಿ ಜೊತೆ ಚರ್ಚಿಸಿ ಮಹಾದಾಯಿ ಸಮಸ್ಯೆ ಬಗೆಹರಿಸಲಾ ಗುವುದು ಎಂದು ಬಿಜೆಪಿ ನಾಯಕರು ಭರವಸೆ ನೀಡಿದ್ದರು. ಆದರೆ, ಇದುವ ರೆಗೂ ಅವರೊಂದಿಗೆ ಚರ್ಚೆ ನಡೆಸಿಲ್ಲ. ಅಲ್ಲದೆ, ಗೋವಾದಲ್ಲಿ ಅವರದೇ ಸರ್ಕಾರ ಇದ್ದು, ಮುಖ್ಯಮಂತ್ರಿ ಮನೋಹರ ಪರಿಕ್ಕರ್ ಅವರೊಂದಿಗೆ ಇದುವರೆಗೂ ಮಾತುಕತೆ ನಡೆಸಿ, ಸಮಸ್ಯೆ ಇತ್ಯರ್ಥಕ್ಕೆ ಮುಂದಾಗಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.