ಬೆಳವಣಿಕಿ (ರೋಣ): ಗ್ರಾಮದಲ್ಲಿ ವೀರಭದ್ರೇಶ್ವರ ರಥೋತ್ಸವ ಅಂಗವಾಗಿ ಸಾಮೂಹಿಕ ವಿವಾಹ, ಕುಂಭ ಮೆರವಣಿಗೆ, ಧರ್ಮಸಭೆ, ತುಲಾಭಾರ, ಜಂಗಮ ವಟುಗಳಿಗೆ ಅಯ್ಯಾಚಾರ, ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.
‘ಸಮಾಜಮುಖಿ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು. ಧಾನ, ಧರ್ಮ, ಭಕ್ತಿ ಗುಣಗಳನ್ನು ಅಳವಡಿಸಿಕೊಂಡವರ ಬದುಕು ಸಾರ್ಥಕವಾಗುತ್ತದೆ’ ಎಂದು ತೋರಗಲ್ಲನ ಚನ್ನಮಲ್ಲ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
‘ಜಾತ್ರೆಯ ನೆಪದಲ್ಲಿ ಧಾರ್ಮಿಕ ಕಾರ್ಯಗಳನ್ನು ಕೈಗೊಳ್ಳಬೇಕು. ಧರ್ಮ ತತ್ವಗಳ ಹಿನ್ನೆಲೆಯಲ್ಲಿ ಜೀವನ ನಡೆಸಬೇಕು, ಸಮಾಜದ ಕಲ್ಯಾಣಕ್ಕೆ ಶ್ರಮಿಸಬೇಕು’ ಎಂದರು. ತೋಗುಣಶಿ ಕುಟುಂಬದವರಿಂದ ವಿರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜ ಅವರ 823ನೇ ತುಲಾಭಾರ ನಡೆಯಿತು.