ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಚನ್ನನಗೌಡ ಪರನಗೌಡರ ಮಾತನಾಡಿ, ಜನಪ್ರತಿನಿಧಿಗಳು ಐದು ವರ್ಷ ಆಡಳಿತ ನಡೆಸಿದರೂ ಸಹಿತ ಅವರಿಗೆ ಸಂವಿಧಾನದಲ್ಲಿ ವಿಶೇಷ ಗೌರವವಿದೆ. ಅಧಿಕಾರಿಗಳು ಸದಸ್ಯರ ಗೌರವಕ್ಕೆ ದಕ್ಕೆ ಬರದಂತೆ ನೋಡಿಕೊಳ್ಳಬೇಕು. ತಮ್ಮ ಇಲಾಖೆ ಕಾರ್ಯಕ್ರಮಗಳಿಗೆ ಸರಿಯಾದ ಮಾಹಿತಿ ನೀಡಿ, ಕಡ್ಡಾಯವಾಗಿ ಆಹ್ವಾನಿಸಬೇಕು. ಶಿಷ್ಠಾಚಾರ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.