ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೈಭೀಮ್ ಕಪ್‌ ಕ್ರಿಕೆಟ್ ಟೂರ್ನಿಗೆ ಚಾಲನೆ

Last Updated 13 ಮೇ 2017, 10:38 IST
ಅಕ್ಷರ ಗಾತ್ರ

ನಾಪೋಕ್ಲು: ದಲಿತ ನಾಗಾಸ್ ಕ್ರೀಡಾ ಅಕಾಡೆಮಿ ಮೂರ್ನಾಡು ವಿದ್ಯಾಸಂಸ್ಥೆ ಮೈದಾನದಲ್ಲಿ ಏರ್ಪಡಿಸಿರುವ ಮೂರು ದಿನಗಳ 16ನೇ ವರ್ಷದ ಜೈಭೀಮ್ ಕಪ್‌ ಕ್ರಿಕೆಟ್ ಟೂರ್ನಿಗೆ ಶುಕ್ರವಾರ ಚಾಲನೆ ನೀಡಲಾಯಿತು.

ಜಯ ಕರ್ನಾಟಕ ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ಮುಕ್ಕಾಟಿರ ರಾಬಿನ್ ಕುಟ್ಟಪ್ಪ ಬ್ಯಾಟ್ ಕ್ರಿಕೆಟ್ ಟೂರ್ನಿಗೆ ಚಾಲನೆ ನೀಡಿದರು.ಈ ಸಂದರ್ಭ ಅವರು, ‘ಅಕಾಡೆಮಿ ಪ್ರತಿವರ್ಷ ಕ್ರೀಡಾಕೂಟ ಏರ್ಪಡಿಸಲಿದೆ. ಇದು, ಎಲ್ಲರನ್ನು ಒಂದುಗೂಡಲು ನೆರ ವಾಗಲಿದೆ’ ಎಂದರು.

ಕಾಂತೂರು ಮೂರ್ನಾಡು ಗ್ರಾ.ಪಂ ಉಪಾಧ್ಯಕ್ಷ ಪೆಮ್ಮಂಡ ಪವಿತ್ರ ಕುಂಞಪ್ಪ, ‘ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹ ನೀಡಬೇಕು’ ಎಂದರು. ಮೂರ್ನಾಡು ಪ್ರೌಢಶಾಲೆ ಶಿಕ್ಷಕ ಕೃಷ್ಣಪ್ಪ ಅಧ್ಯಕ್ಷತೆ ವಹಿಸಿದ್ದರು.

ಕಾಂತೂರು ಮೂರ್ನಾಡು ಗ್ರಾ.ಪಂ ಮಾಜಿ ಅಧ್ಯಕ್ಷ ಪುದಿಯೊಕ್ಕಡ ಪೊನ್ನು ಮುತ್ತಪ್ಪ, ಸ್ಪೋಟ್ಸ್ ಕ್ಲಬ್ ಅಧ್ಯಕ್ಷ ಪಳಂಗಂಡ ಅಪ್ಪಣ್ಣ, ಸಮಾಜ ಸೇವಕ ಸುರೇಶ್ ಮುತ್ತಪ್ಪ, ಗ್ರಾ.ಪಂ ಮಾಜಿ ಸದಸ್ಯ ಅಬ್ದುಲ್ ಖಾದರ್, ನಿವೃತ್ತ ಪೊಲೀಸ್ ಸಣ್ಣಯ್ಯ, ದಲಿತ ನಾಗಾಸ್ ಕ್ರೀಡಾ ಅಕಾಡೆಮಿ ಅಧ್ಯಕ್ಷ ದಿನೇಶ್ ಪೆಗ್ಗೊಲಿ, ಕಾರ್ಯದರ್ಶಿ ಶಿವು, ಸಹ ಕಾರ್ಯದರ್ಶಿ ಮಿಧುನ್, ವ್ಯವಸ್ಥಾಪಕ ಈರ ಸುಬ್ಬಯ್ಯ, ಮಧು, ಶರತ್, ದರ್ಶನ್, ಗಿರೀಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT