ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗಣಿತ ವಿಷಯಕ್ಕೆ 30 ಅಂಕ ಬಂದಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿನಿ ವಾಸವಿ ಎಂಬಾಕೆ ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದಾಳೆ.
ಆಕೆಗೆ ಗಣಿತ ಹೊರತುಪಡಿಸಿ ಎಲ್ಲ ವಿಷಯಗಳಿಗೆ ತಲಾ 80 ಅಂಕಗಳು ಬಂದಿತ್ತು. ‘ಶುಕ್ರವಾರ ಬೆಳಿಗ್ಗೆ ಪೋಷಕರು ಕೆಲಸಕ್ಕೆ ಹೋಗಿದ್ದರು. ಈ ವೇಳೆಯೇ ಪತ್ರವೊಂದನ್ನು ಬರೆದಿಟ್ಟು ವಿದ್ಯಾರ್ಥಿನಿ ಮನೆ ಬಿಟ್ಟು ಹೋಗಿದ್ದಾಳೆ’ ಎಂದು ಪೊಲೀಸರು ತಿಳಿಸಿದರು.
ಆತ್ಮಹತ್ಯೆ ಉಲ್ಲೇಖ: ‘ನಿಮ್ಮ ಕನಸುಗಳನ್ನು ಈಡೇರಿಸಲು ನನ್ನಿಂದ ಸಾಧ್ಯವಾಗಲಿಲ್ಲ. ದಯವಿಟ್ಟು ಕ್ಷಮಿಸಿಬಿಡಿ. ನನಗಾಗಿ ನೀವು ಜಗಳ ಮಾಡಬೇಡಿ. ಸಂತೋಷದಿಂದ ಇರಿ. ನಾನು ಈಗ ಆತ್ಮಹತ್ಯೆ ಮಾಡಿಕೊಳ್ಳಲು ಹೋಗುತ್ತಿದ್ದು, ಹುಡುಕಬೇಡಿ’ ಎಂದು ವಿದ್ಯಾರ್ಥಿನಿ ಪತ್ರದಲ್ಲಿ ಬರೆದಿದ್ದಾಳೆ.
ಪೋಷಕರು ವಿದ್ಯಾರಣ್ಯಪುರ ಠಾಣೆಗೆ ಶನಿವಾರ ದೂರು ಕೊಟ್ಟಿದ್ದಾರೆ.