ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತದಿಂದ ರಕ್ತಚಂದನ ಸಾಗಣೆ ಪತ್ತೆ

Last Updated 13 ಮೇ 2017, 19:47 IST
ಅಕ್ಷರ ಗಾತ್ರ

ಹೊಸಕೋಟೆ: ರಾಷ್ಟ್ರೀಯ ಹೆದ್ದಾರಿ– 207ರ ವೆಂಕಟಾಪುರ ಗೇಟ್ ಬಳಿ  ಸಂಭವಿಸಿದ ಅಪಘಾತದಿಂದಾಗಿ ರಕ್ತಚಂದನ ಸಾಗಣೆ ಜಾಲ ಪತ್ತೆಯಾಗಿದೆ.

ಶನಿವಾರ ಬೆಳಿಗ್ಗೆ ಚಾಲಕನ ನಿಯಂತ್ರಣ ತಪ್ಪಿದ್ದ ಕ್ವಾಲೀಸ್‌ ಕಾರು ರಸ್ತೆಯಲ್ಲೇ ಉರುಳಿಬಿದ್ದಿತ್ತು. ಪರಿಣಾಮ ಕೆಲ ಹೊತ್ತು ದಟ್ಟಣೆ ಉಂಟಾಗಿತ್ತು.

ಸ್ಥಳಕ್ಕೆ ಬಂದ ಪೊಲೀಸರು ವಾಹನ ಸ್ಥಳಾಂತರಕ್ಕೆ ಕ್ರಮ ಕೈಗೊಂಡಿದ್ದರು. ಈ ವೇಳೆಯೇ ಕಾರಿನಲ್ಲಿ ₹11 ಲಕ್ಷ ಮೌಲ್ಯದ ರಕ್ತಚಂದನ ಪತ್ತೆಯಾಗಿತ್ತು. ಅದನ್ನು ಪೊಲೀಸರು ಜಪ್ತಿ ಮಾಡಿದರು.

‘ಅಪಘಾತದ ಬಳಿಕ ಕಾರು ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ.  ಪಶ್ಚಿಮ ಬಂಗಾಳದ ನೋಂದಣಿ ಸಂಖ್ಯೆ ಈ ಕಾರಿಗಿದೆ. ಅದರ ಆಧಾರದಲ್ಲಿ ಆರೋಪಿಗಳನ್ನು ಪತ್ತೆ ಮಾಡುತ್ತಿದ್ದೇವೆ’ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT