ನವದೆಹಲಿ: ಮಾಜಿ ಪ್ರಧಾನಿ, ದಿವಂಗತ ಇಂದಿರಾ ಗಾಂಧಿ ಅವರನ್ನು ಈಗಲೂ ಜನರು ನೆನಪಿಸಿಕೊಳ್ಳುವುದರಿಂದ ಅವರು ಅತ್ಯಂತ ಜನಪ್ರಿಯ ವ್ಯಕ್ತಿ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಿಳಿಸಿದ್ದಾರೆ.
ಇಂದಿರಾ ಗಾಂಧಿ ಅವರ ಆತ್ಮಕಥೆ ‘ಇಂಡಿಯಾಸ್ ಇಂದಿರಾ’ ಕೃತಿಯ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬಡವರಿಗಾಗಿ ಇಂದಿರಾ ಗಾಂಧಿ ರೂಪಿಸಿದ ಯೋಜನೆಗಳೇ ಅವರನ್ನು ನೆನಪಿನಲ್ಲಿಟ್ಟುಕೊಳ್ಳುವಂತೆ ಮಾಡಿವೆ ಎಂದರು.
ಜನಪರವಾದ ಯೋಜನೆಗಳ ರೂಪಿಸುವಾಗ ಅವರು ಏಕಪಕ್ಷಿಯವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದರು. ಸ್ವರ್ಣಮಂದಿರಾ ವಿಷಯದಲ್ಲೂ ಇಂದಿರಾ ಗಾಂಧಿ ಅವರು ಧೈರ್ಯದಿಂದ ನಿರ್ಧಾರ ತೆಗೆದುಕೊಂಡಿದ್ದರು ಎಂದು ಪ್ರಣಬ್ ಮುಖರ್ಜಿ ತಿಳಿಸಿದರು.
ಇಂಡಿಯಾಸ್ ಇಂದಿರಾ ಕೃತಿಯನ್ನು ಕಾಂಗ್ರೆಸ್ ಮುಖಂಡ ಆನಂದ್ ಶರ್ಮಾ ಬರೆದಿದ್ದಾರೆ.