ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶು ವೈದ್ಯಕೀಯ ಸಂಘದಿಂದ ಧರಣಿ

Last Updated 17 ಮೇ 2017, 6:06 IST
ಅಕ್ಷರ ಗಾತ್ರ

ಕಲಬುರ್ಗಿ:  ವೃಂದ ಮತ್ತು ನೇಮಕಾತಿ ನಿಯಮಗಳ ಅಂತಿಮ ಅಧಿಸೂಚನೆ ಹೊರಡಿಸುವಂತೆ ಆಗ್ರಹಿಸಿ ಕರ್ನಾಟಕ ಪಶು ವೈದ್ಯಕೀಯ ಸಂಘದ ಜಿಲ್ಲಾ ಶಾಖೆ ಸದಸ್ಯರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.

ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಅಂತಿಮ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸಂಘದಿಂದ ಪಶು ಸಂಗೋಪನಾ ಸಚಿವರಿಗೆ ಈಚೆಗೆ ಮನವಿ ಸಲ್ಲಿಸಲಾಗಿತ್ತು. ಈ ಬಗ್ಗೆ ಕೂಡಲೇ ಕ್ರಮಕೈಗೊಳ್ಳುವುದಾಗಿ ಅವರು ಭರವಸೆ ನೀಡಿದ್ದರು.

ಆದಾಗ್ಯೂ ಇದುವರೆಗೂ ಅಧಿಸೂಚನೆ ಹೊರಡಿಸಿಲ್ಲ. ಹೀಗಾಗಿ ಕಾರ್ಯ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದೇವೆ ಎಂದು ಧರಣಿ ನಿರತರು ಹೇಳಿದರು.
ಸಂಘದ ಜಿಲ್ಲಾ ಸಮಿತಿ ಗೌರವ ಅಧ್ಯಕ್ಷ ಡಾ. ಬಿ.ಎಸ್.ಸಂಗಮೇಶ, ಅಧ್ಯಕ್ಷ ಡಾ. ಡಿ.ಎಸ್.ಕರಲಗಿಕರ್, ಉಪಾಧ್ಯಕ್ಷ ಡಾ. ಎಸ್.ಎಸ್.ಜಂಬಲದಿನ್ನಿ, ಪ್ರಧಾನ ಕಾರ್ಯದರ್ಶಿ ಡಾ. ಅಲ್ತಾಫ್ ಹುಸೇನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT