ದೊಡ್ಡಬಳ್ಳಾಪುರ: ನಗರದ ಕೈಗಾರಿಕಾ ಪ್ರದೇಶದ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಸುರೇಶ್ ಎಂಬುವವರ ಮನೆಗೆ ನುಗ್ಗಿದ್ದ ಕಳ್ಳನನ್ನು ಸ್ಥಳೀಯರೇ ಹಿಡಿದು ಥಳಿಸಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.
ಥಳಿತಕ್ಕೆ ಒಳಗಾಗಿರುವ ಆರೋಪಿ ಗೌರಿಬಿದನೂರು ಮೂಲದ ಹರೀಶ್. ಸಂಜೆ ಸಮಯ ಗಾರ್ಮೆಂಟ್ ಹೋಗುವ ಒಂಟಿ ಮಹಿಳೆಯರನ್ನು ಅಡ್ಡಗಟ್ಟಿ ಚಿನ್ನಾಭರಣ ದೋಚಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
**
ಕೈಗಾರಿಕಾ ಪ್ರದೇಶದಲ್ಲಿ ಒಬ್ಬಂಟಿಯಾಗಿ ಹೋಗು ವವರನ್ನು ಅಡ್ಡಗಟ್ಟಿ ಚಾಕು ತೋರಿಸಿ ಮೊಬೈಲ್, ನಗದು ದೋಚಿ ಪರಾರಿಯಾಗುತ್ತಿದ್ದ -ಬೋರೇಗೌಡ, ಸ್ಥಳೀಯ ನಿವಾಸಿ