ಈ ಸಮಗ್ರ ಪರೋಕ್ಷ ತೆರಿಗೆ ವ್ಯವಸ್ಥೆಯು ಗರಿಷ್ಠ ಪ್ರಮಾಣದ ತೆರಿಗೆ ಸಂಗ್ರಹಕ್ಕೆ ನೆರವಾಗಲಿದೆ. ಸರ್ಕಾರಗಳ ಹಣಕಾಸು ಪರಿಸ್ಥಿತಿ ಸುಧಾರಿಸಲೂ ನೆರವಾಗಲಿದೆ.
ಸದ್ಯಕ್ಕೆ ಸೇವಾ ತೆರಿಗೆಯಿಂದ ವಿನಾಯ್ತಿ ಪಡೆದಿರುವ ಮೂಲ ಸೇವೆಗಳನ್ನು ಜಿಎಸ್ಟಿ ವ್ಯಾಪ್ತಿಯಿಂದ ಕೈಬಿಡಲು ಸಾಧ್ಯತೆ ಇದೆ. ಜಿಎಸ್ಟಿ ಜಾರಿಗೊಳಿಸುವ ಮೊದಲ ವರ್ಷವೇ ಜನರಿಗೆ ಯಾವುದೇ ಆಘಾತ ನೀಡದಿರಲು ಸರ್ಕಾರ ನಿರ್ಧರಿಸಿದೆ.
ಸದ್ಯಕ್ಕೆ ಸೇವಾ ತೆರಿಗೆಗೆ ಒಳಪಡದ ಪಟ್ಟಿಯಲ್ಲಿ ಧಾರ್ಮಿಕ ಯಾತ್ರೆ, ಆರೋಗ್ಯ ರಕ್ಷಣೆ, ಶಿಕ್ಷಣ, ಪತ್ರಿಕೋದ್ಯಮ ಚಟುವಟಿಕೆ, ಕೌಶಲ ಅಭಿವೃದ್ಧಿ ಒಳಗೊಂಡಂತೆ 60ಕ್ಕೂ ಹೆಚ್ಚು ಸೇವೆಗಳು ತೆರಿಗೆಯಿಂದ ವಿನಾಯ್ತಿ ಪಡೆದಿವೆ.
ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯವಸ್ಥೆಯ ಮಹತ್ವವನ್ನು ಜಮ್ಮು ಮತ್ತು ಕಾಶ್ಮೀರದ ಜನತೆಗೆ ಮನವರಿಕೆ ಮಾಡಿಕೊಡುವ ಉದ್ದೇಶದಿಂದ ಈ ಸಭೆಯನ್ನು ಶ್ರೀನಗರದಲ್ಲಿ ನಡೆಸಲಾಗುತ್ತಿದೆ.
ಶ್ರೀನಗರದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಹಿಂಸಾಚಾರದ ಕಾರಣಕ್ಕೆ ಸಭೆಗೆ ವ್ಯಾಪಕ ಭದ್ರತೆ ಕಲ್ಪಿಸಲಾಗಿದೆ. ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಹಣಕಾಸು ಇಲಾಖೆಯ ಉನ್ನತ ಅಧಿಕಾರಿಗಳು, ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಣಕಾಸು ಸಚಿವರು ಸಭೆಯಲ್ಲಿ ಭಾಗವಹಿಸಲಿದ್ದಾರೆ,