ಜಿಲ್ಲಾಧಿಕಾರಿ ಎನ್. ಜಯರಾಮ್ ಸೂಚನೆ ಮೇರೆಗೆ ಗ್ರಾಹಕರ ಸೋಗಿನಲ್ಲಿ ಚಿತ್ರಮಂದಿರಕ್ಕೆ ತೆರಳಿದ್ದ ಉಪ ವಿಭಾಗಾಧಿಕಾರಿ ಕವಿತಾ ಯೋಗಪ್ಪನವರ ಹಾಗೂ ತಹಶೀಲ್ದಾರ್ ಗಿರೀಶ ಸ್ವಾದಿ, ಅಲ್ಲಿ ಕುಡಿಯುವ ನೀರಿನ ಬಾಟಲಿ ಖರೀದಿಸಿದ್ದಾರೆ. ₹ 20 ಎಂ.ಆರ್.ಪಿ ಎಂದು ನಮೂದಿಸಲಾಗಿದ್ದ ಲೀಟರ್ ನೀರಿನ ಬಾಟಲಿಗೆ ಅಲ್ಲಿನವರು ₹ 50 ಪಡೆದಿದ್ದಾರೆ. ಹೀಗಾಗಿ, ಚಿತ್ರಮಂದಿರದ ವಿರುದ್ಧ ಕ್ರಮ ಕೈಗೊಂಡು, ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.