ಪಶು ವೈದ್ಯಕೀಯ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಕಿರಣಕುಮಾರ ಕೊಪ್ಪದ ಮಾತನಾಡಿ, ‘ಏಪ್ರಿಲ್ನಲ್ಲಿ ನಡೆದ ‘ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ’ದ ವೇಳೆ ಸಚಿವರು ನೀಡಿದ ಭರವಸೆ ತಿಂಗಳು ಕಳೆದರೂ, ಈಡೇರಿಲ್ಲ. ಜೊತೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ, ಜಿಲ್ಲೆಯ ಎಲ್ಲ ಪಶು ಆಸ್ಪತ್ರೆ, ಪಶು ಚಿಕಿತ್ಸಾಲಯ ಮತ್ತು ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರಗಳನ್ನು ಬಂದ್ ಮಾಡಿ, ಅನಿರ್ದಿಷ್ಟಾವಧಿ ಮುಷ್ಕರವನ್ನು ನಡೆಸುತ್ತಿದ್ದೇವೆ’ ಎಂದರು.