ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧರ್ಮಸ್ಥಳ ಸಂಸ್ಥೆಯಿಂದ ಕೊಳಿಹಾಳ ಕೆರೆಗೆ ಕಾಯಕಲ್ಪ

Last Updated 19 ಮೇ 2017, 6:11 IST
ಅಕ್ಷರ ಗಾತ್ರ

ಹುಣಸಗಿ:‘ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಕೆರೆಗಳಿಗೆ ಕಾಯಕಲ್ಪ ಕೊಡುವ ಯೋಜನೆಯನ್ನು ಧರ್ಮಸ್ಥಳ ಮಂಜುನಾಥೇಶ್ವರ ಸಂಸ್ಥೆ ಕೈಗೊಂಡಿದೆ’ ಎಂದು ಸಂಸ್ಥೆಯ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ ತಿಳಿಸಿದರು.

ಕೆರೆ ಕಾಯಕಲ್ಪ ಯೋಜನೆಗೆ ಸಂಬಂಧಿಸಿದಂತೆ ಹುಣಸಗಿ ಸಮೀಪದ ಕೊಳಿಹಾಳ ಗ್ರಾಮದಲ್ಲಿ ಗುರುವಾರ ಗ್ರಾಮಸ್ಥರ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

‘ಸಂಸ್ಥೆಯ ಯಾದಗಿರಿ ಜಿಲ್ಲಾ ಘಟಕದ ನಿರ್ದೇಶಕ ಸಿ.ದಿನೇಶ ಮಾತನಾಡಿ, ‘ಜಿಲ್ಲೆಯಲ್ಲಿ ಈ ಸಂಸ್ಥೆಯಡಿ ಒಟ್ಟು 4,500 ಕ್ಕೂ ಹೆಚ್ಚು ಸ್ವ ಸಹಾಯ ಸಂಘಗಳು ಕಾರ್ಯ ನಿರ್ವಹಿಸುತ್ತಿವೆ. ಮಹಿಳಾ, ರೈತರ ಸ್ವಾವಲಂಬಿ ಜೀವನಕ್ಕೆ ಆದ್ಯತೆ ನೀಡಿದ್ದೇವೆ’ ಎಂದರು.

‘ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಕೆರೆ ಹೂಳೆತ್ತುವ ಯೋಜನೆ ಕೈಗೊಳ್ಳುವ ಉದ್ದೇಶವಿದ್ದು, ಅಂದಾಜು 5 ಎಕರೆ ಪ್ರದೇಶದಲ್ಲಿ  ಯೋಜನೆ ರೂಪಿಸಲಾಗುತ್ತಿದೆ’ ಎಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹನುಮವ್ವ ಹುಲಗಪ್ಪ, ಸಂಸ್ಥೆ ತಾಲ್ಲೂಕು ಯೋಜನಾಧಿಕಾರಿ ಡಿ.ಸಂದೀಪ್, ಅಶೋಕ ದೇಸಾಯಿ, ರೇಣುಕ ಪಾಟೀಲ, ನಿಂಗಣ್ಣ ಮಾಸ್ಟರ್ ,ಹುಲಗಪ್ಪ, ದೇವಣ್ಣ, ಬಸವರಾಜ, ಬಸಮ್ಮ ಬಳವಾಟ, ರಚಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT