ದೇವನಹಳ್ಳಿ ತಾಲ್ಲೂಕಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆರಂಭವಾದ ಮೇಲೆ, ಈ ಭಾಗದಲ್ಲಿ ಸಂಚಾರ ಮಾಡುವ ವಾಹನಗಳ ದಟ್ಟಣೆ ಹೆಚ್ಚಾಗಿದೆ. ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡಲು ಹೋಗುವಂತಹ ಕಾರ್ಮಿಕರ ವಾಹನಗಳು ಸೇರಿದಂತೆ ವಾಹನಗಳ ದಟ್ಟಣೆ ಹೆಚ್ಚಾಗಿದೆ. ರಾಜಧಾನಿ ಬೆಂಗಳೂರಿನಿಂದ ಶಿಡ್ಲಘಟ್ಟ, ಕೋಲಾರ, ಮುಂತಾದ ಕಡೆಗಳಿಗೆ ದಿನನಿತ್ಯ ಸಾವಿರಾರು ವಾಹನಗಳು ಸಂಚಾರ ಮಾಡುತ್ತವೆ. ದೇವನಹಳ್ಳಿಯಿಂದ ವಿಜಯಪುರಕ್ಕೆ ಬರುವ ಹೆದ್ದಾರಿಗೆ ಹೊಂದಿಕೊಂಡಂತೆ ಯಲಿಯೂರು, ಕೋರಮಂಗಲ, ಚಿಕ್ಕತತ್ತಮಂಗಲ, ದೊಡ್ಡತತ್ತಮಂಗಲ, ಗಡ್ಡದನಾಯಕನಹಳ್ಳಿ, ಸೇರಿದಂತೆ ಅನೇಕ ಹಳ್ಳಿಗಳಿಂದ ಬರುವ ಜನರು ಹೆದ್ದಾರಿಗೆ ಪ್ರವೇಶ ಮಾಡುವ ಸಂದರ್ಭದಲ್ಲಿ ವೇಗವಾಗಿ ಸಂಪರ್ಕ ಬರುವ ವಾಹನಗಳಿಗೆ ಸಿಕ್ಕಿ ಅನೇಕ ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ.