ಬೆಳಗಾವಿ: ‘ಟಿಕೆಟ್ ಹಂಚಿಕೆ ಬಗ್ಗೆ ವರಿಷ್ಠರ ತೀರ್ಮಾನವೇ ಅಂತಿಮ’ ಎಂದು ಸಣ್ಣ ಕೈಗಾರಿಕಾ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಇಲ್ಲಿನ ಪ್ರವಾಸಿಮಂದಿರದಲ್ಲಿ ಗುರು ವಾರ ಸಾರ್ವಜನಿಕರ ಕುಂದುಕೊರತೆ ಆಲಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿ, ‘ಕಾಂಗ್ರೆಸ್ ಸಮುದ್ರವಿದ್ದಂತೆ. ಇದು ಯಾರ ಮೇಲೂ ನಿಂತಿಲ್ಲ. ಯಾರೂ ಅನಿವಾರ್ಯರಲ್ಲ. ಮುಖಂಡರ ನಡುವೆ ಭಿನ್ನಾಭಿಪ್ರಾಯ ವಿದ್ದರೆ ವರಿಷ್ಠರು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಾರೆ’ ಎಂದು ತಿಳಿಸಿದರು.