‘ನನಗೆ ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೀಡಿಲ್ಲ. ಮುಖ್ಯಮಂತ್ರಿ ಬರುವ ಮಾಹಿತಿಯೂ ನನಗಿರಲಿಲ್ಲ. ಅವರಿಗೆ ಗೌರವ ನೀಡುವ ಉದ್ದೇಶದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದೆ. ವೇದಿಕೆ ಮೇಲೆ ನಾನೂ ಮಾತನಾಡಬೇಕು. ಅವಕಾಶ ಮಾಡಿಕೊಡಿ ಎಂದು ಮುಖ್ಯಮಂತ್ರಿ, ಮೇಯರ್ ಅವರ ಬಳಿ ಕೇಳಿಕೊಂಡೆ. ಆದರೆ, ಅವರು ನನ್ನನ್ನು ಸುಮ್ಮನಿರಿಸಲು ಪ್ರಯತ್ನಿಸಿದರು’ ಎಂದು ಬೇಸರ ವ್ಯಕ್ತಪಡಿಸಿದರು.