ವಿಜಯಪುರ: ಇಲ್ಲಿನ ಮಹಾನಗರ ಪಾಲಿಕೆಗೆ ಅನುದಾನ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ, ಮೂರು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬಿಜೆಪಿ ಸದಸ್ಯ ಪ್ರಕಾಶ ಮಿರ್ಜಿ ಅವರನ್ನು ಜಲನಗರ ಪೊಲೀಸರು ಶುಕ್ರವಾರ ವಶಕ್ಕೆ ಪಡೆದು, ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ.