ರೈಲು ತಡೆದು ಪ್ರತಿಭಟನೆ: ಟ್ರ್ಯಾಕ್ಮೆನ್ ಮೃತಪಟ್ಟು ಎರಡು ತಾಸಾದರೂ ಸ್ಥಳಕ್ಕೆ ಧಾವಿಸದ ರೈಲ್ವೆ ಇಲಾಖೆ ಅಧಿಕಾರಿಗಳ ಧೋರಣೆ ಖಂಡಿಸಿ, ಸಾರ್ವಜನಿಕರು ಎರಡು ಮುಕ್ಕಾಲು ಗಂಟೆ ಪ್ರತಿಭಟಿಸಿದರು. ಇದರಿಂದ ರೈಲು ಸಂಚಾರಕ್ಕೆ ತಡೆ ಉಂಟಾಯಿತು. ಪ್ರಯಾಣಿಕರಿಗೆ ತೀವ್ರ ತೊಂದರೆಯಾಯಿತು. ನಂತರ ಸ್ಥಳಕ್ಕೆ ಬಂದ ಅಧಿಕಾರಿಗಳು ಪರಿಶೀಲನೆ ನಡೆಸಿ ಇಲಾಖೆಯಿಂದ ಪರಿಹಾರ ಕೊಡಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದರು.