ಬಾಗಲಕೋಟೆ: ರಾಷ್ಟ್ರೀಯ ಯುವ ಸೇವಾ ಯೋಜನೆಯ ಪ್ರಸಕ್ತ ಸಾಲಿನ ರಾಜ್ಯ ಪ್ರಶಸ್ತಿಗೆ ಇಲ್ಲಿನ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಮೂವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಎನ್. ಎಸ್. ಮಾನಸ, ಟಿ. ಎಂ. ನೀತು ಹಾಗೂ ಬಿ. ಕೆ. ತೇಜಕುಮಾರ್ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.ವಿಧಾನಸೌಧದ ಬಾಂಕ್ವೆಟ್ ಹಾಲ್ನಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಿದರು.
ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಹಾಗೂ ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ. ಡಿ. ಎಲ್. ಮಹೇಶ್ವರ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.