ಈಚೆಗೆ ಕಲಬುರ್ಗಿ ತಾಲ್ಲೂಕು ಸೊಂತ ಗ್ರಾಮದಲ್ಲಿ ಅಂಬೇಡ್ಕರ್ ಮೂರ್ತಿ ಅನಾವರಣ ಕಾರ್ಯಕ್ರಮವಿತ್ತು. ಅದರಲ್ಲಿ ಸಂಸದ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಚಿವ ರೇವುನಾಯಕ ಬೆಳಮಗಿ ಸೇರಿದಂತೆ ಹಲವರು ಭಾಗವಹಿಸಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಖರ್ಗೆ ವಿರುದ್ಧ ಇದೇ ಮಾಜಿ ‘ಪೈಲ್ವಾನ್’ ಬೆಳಮಗಿ ಅಖಾಡಕ್ಕೆ ಇಳಿದು ಚೆನ್ನಾಗಿಯೇ ಸೆಣಸಿದ್ದರು. ಅಲ್ಲದೇ ಈ ಗ್ರಾಮವು ಕಲಬುರ್ಗಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಈ ಹಿಂದೆ ಬೆಳಮಗಿ ಇದೇ ಕ್ಷೇತ್ರವನ್ನು ನಾಲ್ಕು ಬಾರಿ ಪ್ರತಿನಿಧಿಸಿದ್ದರು. ಮತ್ತೊಮ್ಮೆ ಕಣಕ್ಕಿಳಿಯಲು ಉತ್ಸುಕರಾಗಿದ್ದಾರೆ.