ಶಾಲಾಭಿವೃದ್ಧಿ ಸಮಿತಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ದ.ಕ. ಜಿಲ್ಲಾಧ್ಯಕ್ಷ ಎಸ್.ಎಂ. ಇಸ್ಮಾಯಿಲ್ ನೆಲ್ಯಾಡಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಾಗಾರದಲ್ಲಿ ಜಿಲ್ಲಾ ಶಿಕ್ಷಕ ಸಂಘದ ಕಾರ್ಯದರ್ಶಿ ರಾಮಕೃಷ್ಣ ಮಲ್ಲಾರ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಬಿ. ಐತ್ತಪ್ಪ ನಾಯ್ಕ್ ಮಾತನಾಡಿದರು.ವೇದಿಕೆಯ ಪುತ್ತೂರು ತಾಲ್ಲೂಕು ಘಟಕದ ಅಧ್ಯಕ್ಷ ಮೊಯಿದ್ದೀನ್ ಕುಟ್ಟಿ ಸ್ವಾಗತಿಸಿ, ಶಿಕ್ಷಕಿ ಕಸ್ತೂರಿ ನಿರೂಪಿಸಿದರು.