ಕೋಲಾರ: ‘ಪಾತಾಳ ಗಂಗೆ ಯೋಜನೆಯಿಂದ ನೀರು ಹೊರ ತೆಗೆಯುವುದನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಆರ್.ರಮೇಶ್ಕುಮಾರ್ ತಿಳಿಸಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಾತಾಳ ಗಂಗೆ ಯೋಜನೆಯ ಸಾಧಕ ಬಾಧಕಗಳ ಬಗ್ಗೆ ಈಗಾಗಲೇ ಯೋಚನೆ ಮಾಡಿದ್ದಾಗಿದೆ. ಇದರಿಂದ ವೈಜ್ಞಾನಿಕವಾಗಿ ಯಾವ ತೊಂದರೆಯೂ ಆಗುವುದಿಲ್ಲ. ಈ ಯೋಜನೆಯ ಅಗತ್ಯವಿದೆ’ ಎಂದು ಪ್ರತಿಪಾದಿಸಿದರು.