ತುಮಕೂರು: ‘ಅಕ್ರಮ ಗಣಿಗಾರಿಕೆ ನಡೆಸಿದ ಬಳ್ಳಾರಿ ಗಣಿಧಣಿ ಜನಾರ್ದನರೆಡ್ಡಿ ಮತ್ತು ಅವರ ಸಹೋದರರ ವಿರುದ್ಧದ ಪ್ರಕರಣಗಳ ಬಗ್ಗೆ ಸಿಬಿಐ ತನಿಖೆ ನಡೆಸಿತ್ತು. ತಾಂತ್ರಿಕ ಕಾರಣದಿಂದ ಪ್ರಕರಣಗಳು ಹೈಕೋರ್ಟ್ನಲ್ಲಿ ವಜಾಗೊಂಡವು. ಆದರೆ, ಕೇಂದ್ರ ಸರ್ಕಾರ ಮೇಲ್ಮನವಿ ಸಲ್ಲಿಸದೇ ಮೃದು ಧೋರಣೆ ತಾಳಿದೆ’ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಆರೋಪಿಸಿದರು.