‘ಹಣದುಬ್ಬರ ಆರ್ಬಿಐ ನಿಗದಿ ಪಡಿಸಿದ ಶೇ4ರ ಗಡಿಯೊಳಗಿದೆ. ಆರ್ಬಿಐ ಬಡ್ಡಿದರ ತಗ್ಗಿಸಿರುವುದೂ ಸಕಾರಾತ್ಮಕ ಬೆಳವಣಿಗೆ’ ಎಂದು ಅಸೋಚಾಂ ಅಧ್ಯಕ್ಷ ಸಂದೀಪ್ ಜಜೋಡಿಯಾ ಬಣ್ಣಿಸಿದ್ದಾರೆ.
‘ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳ ಹೊರತಾಗಿಯೂ ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳ ವಸೂಲಾಗದ ಸಾಲದ ಪ್ರಮಾಣ (ಎನ್ಪಿಎ) ಇನ್ನೂ ಕೂಡ ಸವಾಲಾಗಿಯೇ ಉಳಿದಿದೆ’ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಎನ್ಪಿಎ ಸಮಸ್ಯೆ ನಿವಾರಣೆ, ನಿರ್ಮಾಣ, ರಿಯಲ್ ಎಸ್ಟೇಟ್, ಟೆಲಿಕಾಂ, ಇಂಧನ ಉತ್ಪಾದನೆಗೆ ಆದ್ಯತೆ ನೀಡಬೇಕಿದೆ. ಕೃಷಿ, ಶಿಕ್ಷಣ, ಆರೋಗ್ಯ ಸೇವೆ ಮತ್ತು ಗ್ರಾಮೀಣಾಭಿವೃದ್ಧಿಗೆ ಹೆಚ್ಚಿನ ಅನುದಾನ ಮೀಸಲಿಡುವಂತೆ ‘ಅಸೋಚಾಂ’ ಸಲಹೆ ಹೇಳಿದೆ.