‘ನೀರಾವರಿ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ತೋರಿದ್ದು ಇದನ್ನು ಖಂಡಿಸಿ ವಿಧಾನಸೌಧ ಮುತ್ತಿಗೆ ಹಮ್ಮಿಕೊಳ್ಳಲಾಗುವುದು’ ಎಂದರು.
‘ಜನಪ್ರತಿನಿಧಿಗಳಿಗೆ ಮತ್ತು ಸರ್ಕಾರಕ್ಕೆ ಚುರುಕು ಮುಟ್ಟಿಸಲು ಈ ಚಳವಳಿ ಹಮ್ಮಿಕೊಳ್ಳಲಾಗಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಹಕ್ಕುಪಡೆಯಲು ಮುಂದಾಗಬೇಕು’ ಎಂದ ಕೋರಿದರು.
ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಕೋಲಾಟ ನರಸಿಂಹರೆಡ್ಡಿ ಮಾತನಾಡಿ, ‘ತಾಲ್ಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಬೈಕ್ ರ್ಯಾಲಿಯಲ್ಲಿ ಭಾಗವಹಿಸುವಂತೆ ಮಾಹಿತಿ ನೀಡಲಾಗಿದೆ. ತಾಲ್ಲೂಕಿನಿಂದ ಕನಿಷ್ಠ 2ಸಾವಿರ ರೈತರು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಪಾಲ್ಗೊಳ್ಳವ ನಿರೀಕ್ಷೆ ಇದೆ’ ಎಂದರು.
ಗುಡಿಬಂಡೆ ರೈತ ಸಂಘದ ಅಧ್ಯಕ್ಷ ರಾಮನಾಥ್, ಮುಖಂಡರಾದ ಹುಸೇನ್ ಪುರ ಪ್ರಭಾಕರ್, ಪ್ರಕಾಶ್, ಮಂಜುನಾಥ್, ವೆಂಕಟರೆಡ್ಡಿ, ರಾಮಕೃಷ್ಣರೆಡ್ಡಿ, ಬಾಲಪ್ಪ, ಜಯರಾಮ್ ಇದ್ದರು.