ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸನಗೌಡ ಬಾದರ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ

Last Updated 22 ಮೇ 2017, 6:05 IST
ಅಕ್ಷರ ಗಾತ್ರ

ಸಿಂಧನೂರು: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್  ಅಧ್ಯಕ್ಷರಾಗಿ ಸಿಂಧನೂರಿನ ಬಸನಗೌಡ ಬಾದರ್ಲಿ ಆಯ್ಕೆಯಾಗಿದ್ದು,  ಭಾನುವಾರ ನಗರದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ  ಮೇ17 ರಿಂದ 20ರವರೆಗೆ ಚುನಾವಣೆ ನಡೆಸಲಾಗಿತ್ತು. ಶನಿವಾರ ಮತ್ತು ಭಾನುವಾರ ಮತ ಎಣಿಕೆ ನಡೆದಿದ್ದು, ಬಾದರ್ಲಿ ಒಟ್ಟು 14,537 ಮತಗಳ ಅಂತರದಲ್ಲಿ ಜಯ ಗಳಿಸಿದ್ದಾರೆ ಎಂದು ಭಾನುವಾರ ಕಾಂಗ್ರೆಸ್  ಚುನಾವಣಾಧಿಕಾರಿ ಪ್ರಕಟಿಸಿದರು.

ವಿಷಯ ಹೊರ ಬೀಳುತ್ತಿದ್ದಂತೆ ಯುವ ಕಾಂಗ್ರೆಸ್‌  ಮುಖಂಡರು, ಕಾರ್ಯಕರ್ತರು ನಗರದ ಪ್ರವಾಸಿ ಮಂದಿರದಲ್ಲಿ ಜಮಾವಣೆಗೊಂಡು ಪಕ್ಷದ ಧ್ವಜಗಳನ್ನು ಹಿಡಿದು ಮಹಾತ್ಮಗಾಂಧಿ ವೃತ್ತ, ಬಸ್ ನಿಲ್ದಾಣ, ಬಸವೇಶ್ವರ ವೃತ್ತ, ಟಿಪ್ಪುಸುಲ್ತಾನ್ ವೃತ್ತ, ಹಳೆಬಜಾರ್ ರಸ್ತೆ, ಮಹಾವೀರ ರಸ್ತೆ, ರಾಣಿಚೆನ್ನಮ್ಮ ವೃತ್ತ, ಕನಕದಾಸ ವೃತ್ತ, ಸಾರ್ವಜನಿಕ ಆಸ್ಪತ್ರೆ ಮೂಲಕ ಪುನಃ ಗಾಂಧಿ ವೃತ್ತದವರೆಗೆ ಬೈಕ್ ರ್‍್ಯಾಲಿ ನಡೆಸಿದರು. ನಂತರ ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿ  ಘೋಷಣೆ ಕೂಗಿದರು.

ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಶರಣೇಗೌಡ, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಖಾಜಿಮಲಿಕ್ ವಕೀಲ, ಕೊಪ್ಪಳ ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುರ್ತುಜಾ ಹುಸೇನ್, ನಗರಸಭೆ ಸದಸ್ಯ ನಬಿಸಾಬ, ಮುಖಂಡರಾದ ಪಂಪನ ಗೌಡ ಎಲೆಕೂಡ್ಲಿಗಿ, ಆರ್.ಸಿ.ಪಾಟೀಲ್, ಸೋಮನಗೌಡ ಬಾದರ್ಲಿ, ಮಲ್ಲಿಕಾರ್ಜುನ ಹಟ್ಟಿ, ಆನಂದ ರಾಯ ಬಾಗಿ, ಅಲ್ಲಮ ಪೂಜಾರಿ, ನನ್ನುಸಾಬ ಮೇಸ್ತ್ರಿ, ಬಸವರಾಜ ಮುರಾರಿ, ಹನುಮೇಶ ದಾಸರ್, ಮಹ್ಮದ್ ಖದೀರ್, ಲಿಂಗಾಧರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT