ಹಾಲು, ಮೊಟ್ಟೆ, ಮಾಂಸ ಉತ್ಪಾದನೆಯನ್ನು ಹೆಚ್ಚಿಸುವ ಮಹಾತ್ವಾಕಾಂಕ್ಷೆಯಿಂದ ಯಥೇಚ್ಛವಾಗಿ ಹಾರ್ಮೋನ್ ಬಳಸಲಾಗುತ್ತಿದೆ. ಇದರಿಂದಾಗಿ ಭಾರತದಲ್ಲೂ 10 ವರ್ಷದ ಒಳಗಿನ ಬಾಲಕಿಯರು ಪ್ರೌಢಾವಸ್ಥೆಗೆ ಕಾಲಿಡುತ್ತಿದ್ದಾರೆ. ಪುರುಷರಲ್ಲಿ ಕೂದಲು ಕಡಿಮೆ ಆಗುತ್ತಿದ್ದರೆ, ಮಹಿಳೆಯರ ಮುಖದಲ್ಲಿ ಕೂದಲು ಕಾಣಿಸಿಕೊಳ್ಳುತ್ತಿದೆ. ನಮ್ಮ ಆಹಾರದಲ್ಲಿ ನಾರಿನಾಂಶ ಇಲ್ಲದಿರುವುದೇ ಹಲವು ರೋಗಗಳು ಕಾಣಿಸಿಕೊಳ್ಳಲು ಕಾರಣ ಎಂದು ಆತಂಕ ವ್ಯಕ್ತಪಡಿಸಿದರು.
ವಾಸವಿ ಯುವತಿಯರ ಸಂಘದ ಅಧ್ಯಕ್ಷೆ ಬಿ.ಎ.ರಶ್ಮಿ, ಆರ್ಯ ವೈಶ್ಯ ಮಂಡಳಿ ಅಧ್ಯಕ್ಷ ಬಿ.ಎಲ್.ಸತ್ಯನಾರಾಯಣ ಹಾಗೂ ವಿವೇಕಾನಂದ ಕಾಲೇಜು ಅಧ್ಯಕ್ಷ ಎನ್.ಎನ್.ಶಂಭುಲಿಂಗಪ್ಪ ಭಾಗವಹಿಸಿದ್ದರು.