ಇದಕ್ಕಾಗಿ 30 ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳನ್ನು ನೇಮಕ ಮಾಡಲಾಗಿದೆ. ಇವರು ತಮ್ಮ ಗ್ರಾಮದ ಸಂಘದ ವ್ಯಾಪ್ತಿಯಲ್ಲಿರುವ ಹಾಲು ಉತ್ಪಾದಕರಿಗೆ ಕಡಿಮೆ ಆಹಾರ ನೀಡಿ ಹೆಚ್ಚು ಗುಣಮಟ್ಟದ ಹಾಲು ಪಡೆಯುವ ಕೌಶಲ ತಿಳಿಸಿಕೊಡುವರು ಎಂದರು.
ರೈತರು ಸಂಪನ್ಮೂಲ ವ್ಯಕ್ತಿಗಳಿಂದ ಅಗತ್ಯ ಮಾಹಿತಿ ಪಡೆದು ಪಶುಗಳಿಗೆ ಸಮತೋಲಿತ ಆಹಾರ ನೀಡಲು ಮುಂದಾಗಬೇಕು. ಈ ಪದ್ಧತಿ ಅನುಸರಿಸುವುದರಿಂದ ಹಣ ಹಾಗೂ ಶ್ರಮ ಉಳಿತಾಯವಾಗಲಿದೆ ಎಂದರು.
ವೈದ್ಯಕೀಯ, ಎಂಜಿನಿಯರಿಂಗ್, ಡಿಪ್ಲೋಮಾ ಓದುತ್ತಿರುವ ಹಾಲು ಉತ್ಪಾದಕರ ಸಹಕಾರ ಸಂಘದ ಮಕ್ಕಳಿಗೆ ಮನ್ಮುಲ್ ವತಿಯಿಂದ ಪ್ರೋತ್ಸಾಹಧನ ನೀಡಲಾಗುತ್ತಿದೆ ಎಂದು ಹೇಳಿದರು.
ಮನ್ಮುಲ್ ನಿರ್ದೇಶಕ ಕೆ.ಎಂ. ಉಮೇಶ್, ಉಪವ್ಯವಸ್ಥಾಪಕ ಕೆ.ಎನ್. ಕೃಷ್ಣಮೂರ್ತಿ, ಸಹಾಯಕ ವ್ಯವಸ್ಥಾಪಕ ಆರ್.ಪ್ರಸಾದ್, ವಿಸ್ತರಣಾಧಿಕಾರಿಗಳಾದ ಬಿ.ಎಸ್.ಶಿವಶಂಕರ್, ಎಂ.ಸಿ.ರಶ್ಮಿ, ಹರೀಶ್ ಹೆಗಡೆ, ಮಧು ಇದ್ದರು.