ಈ ಬಗ್ಗೆ ವ್ಯಾಪಾರಿಗಳಿಗೆ ಜಾಗೃತಿ ಮೂಡಿಸಲಾಗಿದೆ. ಬರುವ ದಿನಗಳಲ್ಲಿ ನಿಯಮ ಪಾಲಿಸದಿದ್ದರೆ ಸ್ಥಳದಲ್ಲೇ ದಂಡವಿಧಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿದ್ದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಮೂರು ತಂಡಗಳನ್ನಾಗಿ ವಿಂಗಡಿಸಿ, ಪಟ್ಟಣದಲ್ಲಿ ಎರಡು ಮತ್ತು ಮಾದಾಪುರ ರಸ್ತೆಯಲ್ಲಿ ಇನ್ನೊಂದು ತಂಡ ಕಾರ್ಯಾಚರಣೆ ನಡೆಸಿ, ತಂಬಾಕು ಉತ್ಪನ್ನಗಳನ್ನು ಪ್ರದರ್ಶನಕ್ಕೆ ಇಟ್ಟಿದ್ದ ಅಂಗಡಿ ಮಾಲೀಕರ ಜಾಗೃತಿ ಮೂಡಿಸಲು ಸೂಚಿಸಲಾಯಿತು.