ಜ್ಞಾನಾರ್ಜನೆಗೆ ಯಕ್ಷಗಾನ ಚಟುವಟಿಕೆಗಳು ಪೂರಕವಾಗಿವೆ ಎಂದು ಉಡುಪಿ ಸಿಂಡಿಕೇಟ್ ಬ್ಯಾಂಕ್ನ ಮಹಾಪ್ರಬಂಧಕ ಎಸ್.ಎಸ್. ಹೆಗಡೆ ಹೇಳಿದರು. ಹಂಗಾರಕಟ್ಟೆಯ ಯಕ್ಷಗಾನ ಕಲಾ ಕೇಂದ್ರದ ಕಾರ್ಯದರ್ಶಿ ವಿ. ರಾಜಶೇಖರ್ ಹೆಬ್ಬಾರ್, ಯಕ್ಷಗಾನ ಕಲಾರಂಗದ ಅಧ್ಯಕ್ಷ ಕೆ. ಗಣೇಶ್ ರಾವ್, ಉಪಾಧ್ಯಕ್ಷ ಎಸ್.ವಿ. ಭಟ್ ಉಪಸ್ಥಿತರಿದ್ದರು. ಉಪಾಧ್ಯಕ್ಷ ಗಂಗಾಧರ ರಾವ್ ಸ್ವಾಗತಿಸಿದರು, ಕಾರ್ಯದರ್ಶಿ ಮುರಲಿ ಕಡೆಕಾರ್ ನಿರೂಪಿಸಿದರು, ಜಂಟಿ ಕಾರ್ಯದರ್ಶಿ ಎಂ ನಾರಾಯಣ ಹೆಗಡೆ ವಂದಿಸಿದರು.