“ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 70 ವರ್ಷಗಳಾದರೂ ಇಂದಿಗೂ ಮನೆ, ನಿವೇಶನವಿಲ್ಲದ ಬಡ ಕುಟುಂಬಗಳು ಸಾಕಷ್ಟಿದ್ದು, ಬಡವರಿಗೆ ನಿವೇಶನ ಒದಗಿಸುವುದು ಗ್ರಾಮ ಪಂಚಾಯಿತಿ ಕರ್ತವ್ಯ. ಗ್ರಾಮದಲ್ಲಿ ಸರ್ಕಾರಿ ಜಮೀನು ಇಲ್ಲದಿದ್ದರೆ ಜಿಲ್ಲಾಧಿಕಾರಿಗೆ ನಿವೇಶನ ರಹಿತರ ಪಟ್ಟಿ ನೀಡಬೇಕಿದ್ದು, ಸರ್ಕಾ ರವೇ ಖಾಸಗಿ ಜಮೀನು ಖರೀದಿಸಿ ವಿತರಿಸುತ್ತದೆ, ಆದರೆ ಅಂಬ್ಲಮೊಗರು ಗ್ರಾಮದಿಂದ ಜಿಲ್ಲಾಧಿಕಾರಿಗೆ ಪಟ್ಟಿಯೇ ಹೋಗಿಲ್ಲ’ ಎಂದು ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಯಾದವ ಶೆಟ್ಟಿ ಆರೋಪಿಸಿದರು.