ಗ್ರಾಮದ ಪ್ರಮುಖ ಬೀದಿಗಳಲ್ಲಿ ಪೂಜಾ ಕುಣಿತ, ಡೊಳ್ಳು ಕುಣಿತ, ಪಟದ ಕುಣಿತ ಗಾರುಡಿ ಗೊಂಬೆ, ತಮಟೆ ವಾದನ ಕಲಾ ತಂಡಗಳ ಮೆರವಣಿಗೆ ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸಿಂ.ಲಿಂ.ನಾಗರಾಜು, ನಿಕಟಪೂರ್ವ ಅಧ್ಯಕ್ಷ ಬಿ.ಟಿ.ನಾಗೇಶ್, ಸಾಹಿತಿ ವಿಜಯ್ ರಾಂಪುರ, ಡಿ. ರಾಜಶೇಖರ್, ಚೌ.ಪು.ಸ್ವಾಮಿ, ಗ್ರಾಮ ಪಂಚಾಯಿತಿಯ ಸದಸ್ಯರಾದ ಬೋರೇಗೌಡ, ರಾಮಣ್ಣ, ಅಮ್ಜದ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ವಿಷಕಂಠಯ್ಯ ಮುಂತಾದವರು ಭಾಗವಹಿಸಿದ್ದರು