ಹುಬ್ಬಳ್ಳಿ: ‘ಮತಕ್ಕಾಗಿ ರಾಜಕಾರಣಿಗಳು ವೀರಶೈವ ಧರ್ಮವನ್ನು ಛಿದ್ರ, ಛಿದ್ರ ಮಾಡುತ್ತಿದ್ದಾರೆ. ಆದ್ದರಿಂದ ಯಾರ ಆಮಿಷಕ್ಕೂ ಬಲಿಯಾಗದೆ ಪಂಚಪೀಠಗಳು ಒಂದಾಗಿ ಕಾರ್ಯ ನಿರ್ವಹಿಸಬೇಕು. ಮಾನವ ಧರ್ಮವನ್ನು ಎತ್ತಿ ಹಿಡಿಯಬೇಕು’ ಎಂದು ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯರು ಹೇಳಿದರು.
ನಗರದ ರಂಭಾಪುರಿ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆದ ವೀರಶೈವ ಲಿಂಗಾಯತ ಸಮಾಜದ ಸಭೆ ಉದ್ದೇಶಿಸಿ ಅವರು ಮಾತನಾಡಿದರು.
‘ಕಳಸಾ– ಬಂಡೂರಿ ವಿವಾದ ಸೇರಿದಂತೆ ಅನೇಕ ಸಮಸ್ಯೆಗಳು ರೈತರನ್ನು ಕಾಡುತ್ತಿವೆ. ಸತತ ಬರಗಾಲ ಆವರಿಸಿದೆ. ಮುಂದಿನ ಚುನಾವಣೆಗೆ ಮತ ಕೇಳಲು ಬಂದಾಗ ರಾಜಕಾರಣಿಗಳಿಗೆ ತಕ್ಕ ಪಾಠ ಕಲಿಸಿ’ ಎಂದು ಅವರು ಹೇಳಿದರು.