ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್‌ ತಂತಿ ತಗುಲಿ ಮೂವರು ಸಾವು

Last Updated 24 ಮೇ 2017, 19:30 IST
ಅಕ್ಷರ ಗಾತ್ರ
ಹಾಸನ: ತಾಲ್ಲೂಕಿನ ಶಂಕರನಹಳ್ಳಿ ಗೇಟ್ ಸಮೀಪ ತುಂಡಾಗಿ ರಸ್ತೆಗೆ ಬಿದ್ದಿದ್ದ ವಿದ್ಯುತ್‌ ತಂತಿ ಮೇಲೆ ಮಂಗಳವಾರ ರಾತ್ರಿ ಬೈಕ್‌ ಸಾಗಿದ್ದರಿಂದ ವಿದ್ಯುತ್‌ ತಗುಲಿ ಮೂವರು ಮೃತಪಟ್ಟಿದ್ದಾರೆ.
 
ತಾಲ್ಲೂಕಿನ ಗೋಪನಹಳ್ಳಿ ಗ್ರಾಮದ ರವಿ (56), ಪ್ರಸಾದ್ (23) ಮತ್ತು ಕಿಟ್ಟಿ (59) ಮೃತರು. ಇವರು ಹಾಸನದಿಂದ ಗ್ರಾಮಕ್ಕೆ ರಾತ್ರಿ ಹಿಂದಿರುಗುವಾಗ ಬಿರುಗಾಳಿ ಸಹಿತ ಮಳೆ ಬಂದಿದೆ.
 
ಶಂಕರನಹಳ್ಳಿ ಗೇಟ್ ಬಳಿ ವಿದ್ಯುತ್ ಪರಿವರ್ತಕದ ತಂತಿ ತುಂಡಾಗಿ ರಸ್ತೆಗೆ ಬಿದ್ದಿದೆ. ಬೈಕ್‌ ಓಡಿಸುತ್ತಿದ್ದ ರವಿ ಇದನ್ನು ಗಮನಿಸದೆ ತಂತಿ ಮೇಲೆ ಬೈಕ್ ಹತ್ತಿಸಿಕೊಂಡು ಹೋಗುತ್ತಿದ್ದಂತೆ ವಿದ್ಯುತ್ ತಗುಲಿದೆ. ಪರಿಣಾಮ, ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT