ಭದ್ರಾವತಿ: ಕರ್ನಾಟಕ ರಾಜ್ಯ ಬಾಲ್ ಬ್ಯಾಡ್ಮಿಂಟನ್ ಸಂಸ್ಥೆ ಮತ್ತು ಶಿವಮೊಗ್ಗ ಜಿಲ್ಲಾ ಬಾಲ್ಬ್ಯಾಡ್ಮಿಂಟನ್ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಗುರುವಾರ ಮತ್ತು ಶುಕ್ರವಾರ ಇಲ್ಲಿ 41ನೇ ದಕ್ಷಿಣ ವಲಯ ಅಂತರ ರಾಜ್ಯ ಪುರುಷರ ಮತ್ತು ಮಹಿಳಾ ಬಾಲ್ಬ್ಯಾಡ್ಮಿಂಟನ್ ಚಾಂಪಿ ಯನ್ಷಿಪ್ ನಡೆಯಲಿದೆ.
ಆತಿಥೇಯ ಕರ್ನಾಟಕವೇ ಅಲ್ಲದೆ, ತಮಿಳುನಾಡು, ಕೇರಳ, ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಪುದುಚೇರಿ ರಾಜ್ಯ ಗಳ ತಂಡಗಳು ಹಣಾಹಣಿ ನಡೆಸಲಿವೆ.
ರೌಂಡ್ರಾಬಿನ್ ಲೀಗ್ ಮಾದರಿಯಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಮೊದಲ ಎರಡು ಸ್ಥಾನಗಳನ್ನು ಗಳಿಸುವ ತಂಡಗಳು ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಅಂತರ ವಲಯ ಚಾಂಪಿಯನ್ಷಿಪ್ನಲ್ಲಿ ಪಾಲ್ಗೊಳ್ಳಲಿವೆ.