ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯವು ಬುಧವಾರ ಗೀತ ರಚನೆಕಾರ ಜಾವೇದ್ ಅಖ್ತರ್ ಅವರ ಹೇಳಿಕೆ ಪಡೆದಿದೆ.
‘ಅಖ್ತರ್ ಅವರೇ ಪ್ರಕರಣದ ಬಗ್ಗೆ ದೂರು ನೀಡಿದ್ದರು. ಹೆಚ್ಚಿನ ಮಾಹಿತಿ ಪಡೆಯಲು ಅವರ ವಿಚಾರಣೆ ನಡೆಸಲಾಗುತ್ತಿದೆ’ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹೇಳಿದ್ದಾರೆ.
ಅಖ್ತರ್ ಅವರು ನಿರ್ದೇಶಕ ಮಂಡಳಿ ಅಧ್ಯಕ್ಷರಾಗಿರುವ ಇಂಡಿಯನ್ ಪರ್ಫಾರ್ಮಿಂಗ್ ರೈಟ್ ಸೊಸೈಟಿ ಲಿಮಿಟೆಡ್ (ಐಪಿಆರ್ಎಸ್) ತನ್ನ ಸದಸ್ಯರಿಗೆ ಬಾಕಿ ಪಾವತಿಸಿಲ್ಲ ಎಂದು ಆರೋಪಿಸಲಾಗಿತ್ತು.
‘ವಿಚಾರಣೆಗೆ ಪ್ರತಿನಿಧಿಯೊಬ್ಬರನ್ನು ಕಳುಹಿಸುವಂತೆ ಅಖ್ತರ್ ಅವರಿಗೆ ಸೂಚಿಸಲಾಗಿತ್ತು. ತನಿಖಾಧಿಕಾರಿಗಳಿಗೆ ಸಹಕಾರ ನೀಡಲು ಅವರೇ ಬಂದಿದ್ದಾರೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.