ಲಖನೌ : ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಹಾಗೂ ಇತರರ ವಿರುದ್ಧ ಇಲ್ಲಿನ ವಿಶೇಷ ಸಿಬಿಐ ನ್ಯಾಯಾಲಯದಲ್ಲಿ ಗುರುವಾರ ಹೆಚ್ಚುವರಿ ಆರೋಪಗಳನ್ನು ಹೊರಿಸುವ ಸಾಧ್ಯತೆಯಿದೆ.
ಆರೋಪಿಗಳ ವಿರುದ್ಧ ಹೆಚ್ಚುವರಿ ಆರೋಪ ದಾಖಲಿಸುವಂತೆ ಕೋರ್ಟ್ ನಿರ್ದೇಶಿಸಿತು ಎಂದು ಸರ್ಕಾರಿ ವಕೀಲರು ಬುಧವಾರ ತಿಳಿಸಿದ್ದಾರೆ.
ಪ್ರಕರಣದಲ್ಲಿ ಅಡ್ವಾಣಿ, ಮುರಳಿ ಮನೋಹರ ಜೋಷಿ ಮತ್ತು ಉಮಾ ಭಾರತಿ ಅವರ ಪಾತ್ರದ ಬಗ್ಗೆ ಮರು ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಏಪ್ರಿಲ್ 19ರಂದು ನಿರ್ದೇಶನ ನೀಡಿತ್ತು.