ಬೆಳಗಾವಿ: ನಗರದ ವ್ಯಾಪಾರಿಯೊಬ್ಬರ ಪುತ್ರನನ್ನು ಅಪಹರಿಸಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ, ಭೂಗತ ಪಾತಕಿ ರಶೀದ್ ಮಲಬಾರಿಯ ಸಹಚರ ಬಿಲಾಲ್ ಉಮರಖಾನ್ ಸೇರಿದಂತೆ ಇಬ್ಬರನ್ನು ಮುಂಬೈ ಹಾಗೂ ಬೆಂಗಳೂರಿನಲ್ಲಿ ಬಂಧಿಸಲಾಗಿದೆ.
ಶಾರ್ಪ್ ಶೂಟರ್ ಬಿಲಾಲ್, ಮುಂಬೈ ಭೂಗತ ಪಾತಕಿ ಛೋಟಾ ಶಕೀಲ್ ಗುಂಪಿನ ಸದಸ್ಯ. ಈತನನ್ನು ಮುಂಬೈನಲ್ಲಿ ಬಂಧಿಸಿದ ಪೊಲೀಸರು ಬುಧವಾರ ಬೆಳಿಗ್ಗೆ ಇಲ್ಲಿನ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಒಂದು ವಾರ ಪೊಲೀಸ್ ವಶಕ್ಕೆ ಒಪ್ಪಿಸಿದೆ.