ಮಂಡ್ಯ: ತಾಲ್ಲೂಕಿನ ಬಸರಾಳು ಗ್ರಾಮದ ಹೊರವಲಯದಲ್ಲಿ ಜಿಂಕೆಯೊಂದು ಮೃತಪಟ್ಟಿರುವುದು ಬುಧವಾರ ಬೆಳಕಿಗೆ ಬಂದಿದೆ.
ಜಿಂಕೆಯು ಆಹಾರ ಅರಸಿ ಬಂದಿದೆ. ಯಾರೋ ದುಷ್ಕರ್ಮಿಗಳು ಅದನ್ನು ಕೊಂದು ಗ್ರಾಮದ ಹೊರವಲಯದ ಪಾಳು ಗುಂಡಿಯಲ್ಲಿ ತೆಂಗಿನ ಗರಿ ಸಮೇತ ಮುಚ್ಚಿ ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರೀಶೀಲನೆ ನಡೆಸಿದರು. ಜಿಂಕೆಯ ಕಳೇಬರವನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸ್ ಸಬ್ಇನ್ಸ್ಪೆಕ್ಟರ್ ಜಾರ್ಜ್ ವಿಲ್ಸನ್ ತಿಳಿಸಿದರು.
ಪಂಚನಾಮೆ ನಡೆಸಿದ ನಂತರ ಸತ್ಯಾಂಶ ಹೊರ ಬರಲಿದೆ ಎಂದು ಮಂಡ್ಯ ಉಪವಲಯ ಅರಣ್ಯಾಧಿಕಾರಿ ಪುಟ್ಟಸ್ವಾಮಿ ತಿಳಿಸಿದರು.